Saturday, May 18, 2024
Homeಕರಾವಳಿಮಂಗಳೂರು; ಸುರತ್ಕಲ್ ನ ವಿದ್ಯಾರ್ಥಿ ತಿರುಪತಿಯಲ್ಲಿ ಜಲಪಾತದಲ್ಲಿ ಸಾವು

ಮಂಗಳೂರು; ಸುರತ್ಕಲ್ ನ ವಿದ್ಯಾರ್ಥಿ ತಿರುಪತಿಯಲ್ಲಿ ಜಲಪಾತದಲ್ಲಿ ಸಾವು

spot_img
- Advertisement -
- Advertisement -

ಮಂಗಳೂರು; ಸುರತ್ಕಲ್ ನ ವಿದ್ಯಾರ್ಥಿ ತಿರುಪತಿಯಲ್ಲಿ ಜಲಪಾತದಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.ಸುರತ್ಕಲ್ ಸಮೀಪದ ಹೊನ್ನೆಕಟ್ಟೆ ನಿವಾಸಿ ಸುಮಂತ್ ಅಮೀನ್ (23) ಮೃತಪಟ್ಟ ವಿದ್ಯಾರ್ಥಿ. ಈತ ಪ್ರವಾಸಕ್ಕಾಗಿ ತಿರುಪತಿಗೆ ತೆರಳಿದ್ದ. ಅಲ್ಲಿನ ಜಲಪಾತಕ್ಕೆ ಧುಮುಕಿ ಬಳಿಕ ಮೇಲೆ ಏರಲಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಚೆನ್ನೈಯ ರಾಜೀವ ಗಾಂಧಿ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್ ಅಮೀನ್ ಶುಕ್ರವಾರ ತನ್ನ ತಂದೆಯ ಬಳಿ ತಿರುಪತಿಗೆ ಹೋಗುವುದಾಗಿ ಹೇಳಿದ್ದ. ಮಧ್ಯಾಹ್ನ 2:30ರ ವೇಳೆಗೆ ತಿರುಪತಿಯಿಂದ 60 ಕಿ.ಮೀ. ದೂರದ ತಲಕೋನ ಜಲಪಾತಕ್ಕೆ ತನ್ನ ಸಹಪಾಠಿ ಜತೆ ಹೋಗಿ ಸ್ನಾನ ಮಾಡುತ್ತಾ ಬಂಡೆಕಲ್ಲಿನಿಂದ 10 ಅಡಿ ಕೆಳಕ್ಕೆ ಧುಮುಕಿದಾಗ ನೀರು ಹಾದು ಹೋಗುವ ಗುಹೆಗೆ ಕಾಲು ಸಿಲುಕಿದೆ ಎನ್ನಲಾಗಿದೆ.

ತಕ್ಷಣ ಇತರ ಸ್ನೇಹಿತರು ಸುಮಂತ್‌ನನ್ನು ಪಾರು ಮಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಮನೆಯವರ ಗಮನಕ್ಕೆ ತಂದಿದ್ದು, ಭಾನುವಾರ ಮೃತದೇಹವನ್ನು ಕುಳಾಯಿ ಹೊನ್ನೆಕಟ್ಟೆಯಲ್ಲಿರುವ ಮನೆಗೆ ತಂದು ಬಳಿಕ ಅಂತ್ಯ ಸಂಸ್ಕಾರ ಮಾಡಲಾಯಿತು.

ಸುಮಂತ್ ಅಮೀನ್ ಪ್ರವಾಸ, ಡಾಕ್ಯುಮೆಂಟರಿ, ಫೊಟೋಗ್ರಫಿಯ ಹವ್ಯಾಸ ಬೆಳೆಸಿಕೊಂಡಿದ್ದ. ಸುಮಂತ್ ತಂದೆ ಕೆನರಾ ಬ್ಯಾಂಕ್ ಮ್ಯಾನೇಜರ್ ಸುರೇಶ್ ಅಮೀನ್, ತಾಯಿ ಕೆಂಜಾರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಉಮಾಕ್ಷಿ ಹಾಗೂ ತಂಗಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!