- Advertisement -
- Advertisement -
ಮಂಗಳೂರು: ದಕ್ಷಿಣಕನ್ನಡ ಡಿಸಿ ಡಾ.ಡಿ.ವಿ ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇವರ ಪತ್ನಿ ಹಾಗೂ ಮಗುವಿಗೂ ಸೋಂಕು ದೃಢಪಟ್ಟಿದೆ. ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡಾ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲಿಸಬೇಕಾಗಿದೆ.
- Advertisement -