- Advertisement -
- Advertisement -
ಮಂಗಳೂರು: ಪಟಾಕಿ ಅಂಗಡಿ ಮಾಲೀಕನಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂದರು ಪ್ರದೇಶದಲ್ಲಿ ಪಟಾಕಿ ಅಂಗಡಿ ಹೊಂದಿರುವ ಮುರಳೀಧರ ಪೈ ಎಂಬವರಿಗೆ ಭಾನುವಾರ ಸಂಜೆ 6:30ರ ವೇಳೆಗೆ ಕರೆ ಮಾಡಿದ ಅನ್ಯ ವ್ಯಕ್ತಿಯೊಬ್ಬ 5 ಲಕ್ಷ ರೂ.ಮೌಲ್ಯದ ಪಟಾಕಿ ಬೇಕಾಗಿದ್ದು, ನಗರದ ಹೋಟೆಲ್ ಗೆ ಬರಬೇಕೆಂದು ಸೂಚಿಸಿದ್ದ ಎನ್ನಲಾಗಿದೆ. ಅಲ್ಲಿಗೆ ಬರಲು ಸಾಧ್ಯವಿಲ್ಲ ಎಂದು ಮುರಳೀಧರ ಪೈ ಹೇಳಿದ್ದರು ಎನ್ನಲಾಗಿದೆ.
ಇದಾದ ಬೆನ್ನಲ್ಲೇ ಸೋಮವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಮುರಳೀಧರ ಪೈ ಅವರು ಅಂಗಡಿಯಲ್ಲಿದ್ದಾಗ ಅವರ ಪರಿಚಯಸ್ಥರೇ ಆದ ದಿನೇಶ್ ಶೆಟ್ಟಿ ಹಾಗೂ ಇತರ 4 ಮಂದಿ ಏಕಾಏಕಿ ಅಂಗಡಿಗೆ ನುಗ್ಗಿ 5 ಲಕ್ಷ ರು. ಹಣ ಕೊಡಬೇಕು, ಇಲ್ಲವಾದರೆ ಶೂಟ್ ಮಾಡಿ ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಕೆನ್ನೆಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ದೂರಿನಲ್ಲಿ ತಿಳಿಸಲಾಗಿದೆ.
- Advertisement -