- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಭಗವಾನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಗುಪ್ತಚರ ಇಲಾಖೆ ಎಸ್ಪಿ ಆಗಿದ್ದ ಅಮಟೆ ವಿಕ್ರಮ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ಆಗಿ ವರ್ಗಾಯಿಸಲಾಗಿದೆ.ದ.ಕ. ಎಸ್ಪಿ ಹುದ್ದೆಯಿಂದ ವರ್ಗಾವಣೆಗೊಂಡ ಋಷಿಕೇಶ್ ಸೋನಾವಣೆ ಅವರನ್ನು ಗುಪ್ತಚರ ಇಲಾಖೆ ಎಸ್ಪಿ ಸ್ಥಾನಕ್ಕೆ ನೇಮಿಸಲಾಗಿದೆ.
ರಾಜ್ಯ ಸರ್ಕಾರ ನಾಲ್ಕು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
- Advertisement -