Friday, April 26, 2024
Homeಕರಾವಳಿಬೆಳ್ತಂಗಡಿ : ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ -2023 ಕ್ಕೆ ಉಜಿರೆಯ ಸಂಧ್ಯಾ ಫ್ರೆಶ್...

ಬೆಳ್ತಂಗಡಿ : ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ -2023 ಕ್ಕೆ ಉಜಿರೆಯ ಸಂಧ್ಯಾ ಫ್ರೆಶ್ ಉದ್ಯಮ ಆಯ್ಕೆ

spot_img
- Advertisement -
- Advertisement -

ಬೆಳ್ತಂಗಡಿ : ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2023 ಈ ಬಾರಿ ಉಜಿರೆಯ ಸಂಧ್ಯಾ ಫ್ರೆಶ್ ಉತ್ಪಾದನೆ ಮತ್ತು ಪ್ಯಾಕೇಜಿಂಗ್ ಕೈಗಾರಿಕಾ ಘಟಕಕ್ಕೆ ಲಭಿಸಿದೆ.

ಆಂಧ್ರಪ್ರದೇಶದ ಶ್ರೀ ರಾಘವೇಂದ್ರ ಸ್ವಾಮಿ ಮಠ, ಮಂತ್ರಾಲಯದಿಂದ ಪ್ರತಿ ವರ್ಷವೂ ಸಾಧಕರನ್ನು ಗುರುತಿಸಿ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಬಾರಿ ದಕ್ಷಿಣ ಭಾರತದಿಂದ ಒಟ್ಟು 25 ಮಂದಿಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತಿದ್ದಾರೆ. ಈ ಪ್ರಶಸ್ತಿಯಲ್ಲೊಂದು ಗ್ರಾಮೀಣ ಮಹಿಳಾ ಕೈಗಾರಿಕಾ ಉದ್ಯಮಿ ಪ್ರಶಸ್ತಿಯನ್ನು ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಧ್ಯಾ ಫ್ರೆಶ್ ಉತ್ಪಾದನೆ ಮತ್ತು ಪ್ಯಾಕೇಜಿಂಗ್ ಕೈಗಾರಿಕಾ ಘಟಕದ ಉದ್ಯಮಕ್ಕೆ ಲಭಿಸಿದೆ.

ಆಂಧ್ರಪ್ರದೇಶದ ಶ್ರೀ ರಾಘವೇಂದ್ರ ಸ್ವಾಮಿ ಮಠ ಮಂತ್ರಾಲಯದಲ್ಲಿ  ಜನವರಿ 25 ರಂದು ಸಂಜೆ 4:30 ಕ್ಕೆ ಮಂತ್ರಾಲಯದ ಗುರುಗಳಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಉಜಿರೆಯ ಸಂಧ್ಯಾ ಫ್ರೆಶ್ ಘಟಕದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅರ್ಚನಾ ರಾಜೇಶ್ ಪೈ ಸ್ವೀಕರಿಸಿಕೊಳ್ಳಲಿದ್ದಾರೆ‌.

- Advertisement -
spot_img

Latest News

error: Content is protected !!