- Advertisement -
- Advertisement -
ಉಡುಪಿ: ವಿಧಾನಸಭಾ ಚುನಾವಣೆಯ ದೃಷ್ಟಿಕೋನದಿಂದ ಪೂರ್ಣ ತಯಾರಿ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಮಾತನಾಡಿದ ಕಟೀಲ್, ವಿಸ್ತಾರಕ್, ಪೇಜ್ ಕಮಿಟಿ, ಬೂತ್ ಕಮಿಟಿ ಸಕ್ರಿಯವಾಗಿದೆ. ಖಂಡಿತವಾಗಿ 150 ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೇ ಇದಕ್ಕೆ ಬೇಕಾದ ಕಾರ್ಯ ಯೋಜನೆ ಮಾಡಿದ್ದೇವೆ. ಅನೇಕ ಮಂದಿ ಬಿಜೆಪಿ ಸೇರಲಿದ್ದಾರೆ, ಮಾತುಕತೆ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಪಕ್ಷ ಸೇರುತ್ತಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
- Advertisement -