- Advertisement -
- Advertisement -
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ 4 ತಿಂಗಳಾಗುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ವಿಧಾನಸೌಧ ಚಲೋ ಪ್ರತಿಭಟನೆ ಕೈಗೊಂಡಿದ್ದ ರೈತರು ಮಾರ್ಚ್ 26 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಅಂದು ದೇಶಾದ್ಯಂತ ಬಂದ್ ನಡೆಸಲು ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿದೆ.
ಬೆಂಗಳೂರಿನಲ್ಲಿ ನಿನ್ನೆ ರೈತ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ರಾಜ್ಯ ನಾಯಕರು ಮಾರ್ಚ್ 26 ರಂದು ಕರ್ನಾಟಕ ಬಂದ್ ಘೋಷಿಸಿ ಪೋಸ್ಟರ್ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ.
- Advertisement -