Saturday, May 18, 2024
Homeಕರಾವಳಿಉಡುಪಿಉಡುಪಿಯಲ್ಲಿ ವರ ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದ ವಧು

ಉಡುಪಿಯಲ್ಲಿ ವರ ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದ ವಧು

spot_img
- Advertisement -
- Advertisement -

ಉಡುಪಿ : ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವಧುವೊಬ್ಬಳು ತನಗೆ ಈ ಮದುವೆ ಇಷ್ಟವಿಲ್ಲವೆಂದು ಹೇಳಿ ವಿವಾಹವೊಂದು ಮುರಿದು ಬಿದ್ದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ವರ ಮೂಲತಃ ಬ್ರಹ್ಮಾವರದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಸುಮಾರು 4 ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥವಾಗಿತ್ತು. ಇಬ್ಬರೂ ದೂರವಾಣಿ ಸಂಪರ್ಕದಲ್ಲಿದ್ದರು. ಮದುವೆ ಕ್ರಮಗಳೆಲ್ಲಾ ಮುಂದುವರಿದು ತಾಳಿ ಕಟ್ಟುವ ಸಂದರ್ಭ ಬಂದಾಗ ವಧು, ವರನನ್ನು ಅಲ್ಲಿಯೇ ಕೊಠಡಿಗೆ ಕರೆದುಕೊಂಡು ಹೋಗಿ ತನಗೆ ಈ ಮದುವೆ ಇಷ್ಟವಿಲ್ಲ. ಬೇರೆ ಪ್ರಪೋಸಲ್‌ ಇಷ್ಟಪಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಸುಮಾರು 1,000 ಮಂದಿಗೆ ಊಟೋಪಾಚಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಕೊನೆಗೆ ಮದುವೆ ಮುರಿದು ಬಿದ್ದಿದೆ.

ಕೊನೆಗೆ ಬ್ರಹ್ಮಾವರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಎರಡೂ ಕಡೆಯವರು ಖರ್ಚಿನ ಸಮಪಾಲು ಹಾಕಲು ಒಪ್ಪುವುದರೊಂದಿಗೆ ಪ್ರಕರಣ ಮುಕ್ತಾಯಗೊಂಡಿತು.

- Advertisement -
spot_img

Latest News

error: Content is protected !!