Friday, June 27, 2025
Homeಕರಾವಳಿಕಾಸರಗೋಡುಕಾಸರಗೋಡು; ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾಸರಗೋಡು; ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಕಾಸರಗೋಡು; ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ.

ದಾಮೋದರರವರ ಪುತ್ರಿ ಅಶ್ವತಿ(25) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ತಾಯಿ ಸುಜಾತ ಮನೆ ಸಮೀಪದ ಬೀಡಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು.ಅವರು ಮಧ್ಯಾಹ್ನ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಅಶ್ವತಿ ಬಾಗಿಲು ಬಡಿದರೂ ತೆರೆಯದಿದ್ದುರಿಂದ ಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ, ಬಾಗಿಲು ತೆರೆದು ನೋಡಿದಾಗ ನೇಣುಬಿಗಿದಿರುವುದು ಕಂಡು ಬಂದಿದೆ. ಅಶ್ವತಿ ಕಣ್ಣೂರಿನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳಿಂದ ರಜೆಯಲ್ಲಿದ್ದಳು. ಪತಿ ಮನೋಹರ್ ವಿದೇಶ ದಲ್ಲಿ ಉದ್ಯೋಗದಲ್ಲಿದ್ದರು.

ಅಶ್ವತಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!