Thursday, May 2, 2024
Homeಕರಾವಳಿವಿಟ್ಲದಲ್ಲಿ ವಿವಾಹಿತೆ ಆತ್ಮಹತ್ಯೆ

ವಿಟ್ಲದಲ್ಲಿ ವಿವಾಹಿತೆ ಆತ್ಮಹತ್ಯೆ

spot_img
- Advertisement -
- Advertisement -

ವಿಟ್ಲ : ವಿವಾಹಿತ ಮಹಿಳೆ  ಆತ್ಮಹತ್ಯೆ ಮಾಡಿಕೊಂಡ ಘಟನೆ ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ.ಮಂಗಳೂರು ತಾಲೂಕು ಯೆಯ್ಯಾಡಿ, ಕೊಂಚಾಡಿ ಕೊಪ್ಪಳ ಕಾಡು ನಿವಾಸಿ ಸುರೇಶ್ ಚೌಟ ಎಂಬವರ ಪುತ್ರಿ ಪ್ರೀತಿ ಶೆಟ್ಟಿ (37) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಪ್ರೀತಿ ಶೆಟ್ಟಿ ಅವರು ತನ್ನ ಮಗುವನ್ನು ಕಳೆದುಕೊಂಡು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.9ರಂದು ತೋಟಕ್ಕೆ ಸಿಂಪಡಿಸಲೆಂದು ತಂದಿಟ್ಟಿದ್ದ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!