Saturday, May 4, 2024
Homeಕರಾವಳಿಉಪ್ಪಿನಂಗಡಿ: ಮುಖವಾಡ ಧರಿಸಿದ ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಇರಿದು ಪರಾರಿ...!

ಉಪ್ಪಿನಂಗಡಿ: ಮುಖವಾಡ ಧರಿಸಿದ ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಇರಿದು ಪರಾರಿ…!

spot_img
- Advertisement -
- Advertisement -

ಉಪ್ಪಿನಂಗಡಿ: ಹಳೆಗೇಟ್‌ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಮುಖವಾಡ ಧರಿಸಿದ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಕಜೆಕಾರ್ ನಿವಾಸಿ ಅಶೋಕ್ ಶೆಟ್ಟಿ ಗಾಯಗೊಂಡಿದ್ದಾರೆ.

ಅಶೋಕ್ ಅವರು ಇಲ್ಲಿನ ಹಳೆಗೇಟ್ ಬಳಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಈತ ಹಿಂದೂ ಸಂಘಟನೆಯ ಕಾರ್ಯಕರ್ತನೂ ಹೌದು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಅಶೋಕ್ ಅಂಗಡಿಯ ಬಳಿ ನಿಂತಿದ್ದಾಗ ಮುಸುಕುಧಾರಿಗಳು ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದಾರೆ. ಕೂಡಲೇ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಎರಡು ತಿಂಗಳ ಹಿಂದೆ ಅವರ ಮೀನಿನ ಅಂಗಡಿಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹಾನಿಗೊಳಿಸಿದ್ದರು. ಘಟನೆಯ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಸರಣಿ ಪ್ರತಿಭಟನೆ ನಡೆಸಿತ್ತು. ಆದರೆ, ಅಂಗಡಿಗೆ ಬೆಂಕಿ ಹಚ್ಚಿದವರನ್ನು ಇನ್ನೂ ಬಂಧಿಸಿಲ್ಲ.

- Advertisement -
spot_img

Latest News

error: Content is protected !!