ಗಂಗೊಳ್ಳಿ : ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಹತ್ಯೆಯನ್ನು ಖಂಡಿಸಿ ಶುಕ್ರವಾರ ಗಂಗೊಳ್ಳಿಯಲ್ಲಿ ಸ್ವಯಂ ಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿದ್ದು, ಜನರ ಸಂಪೂರ್ಣ ಬೆಂಬಲ ದೊರೆತಿದೆ.
ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಸುತ್ತಿರುವ ಪ್ರತಿಭಟನೆ ಅಂಗವಾಗಿ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಜಾನುವಾರು ಹತ್ಯೆ ಹಾಗೂ ಗೋ ಹಂತಕರ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗುತ್ತಿದ್ದಾರೆ. ಮಾತ್ರವಲ್ಲದೆ ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ.
ಸಾವಿರಕ್ಕೂ ಅಧಿಕ ಜನರು ಪ್ರಮುಖ ಬೀದಿಗಳ ಮೂಲಕ ಸಾಗಿ ಬಂದು ಗಂಗೊಳ್ಳಿಯ ಮೀನುಗಾರಿಕಾ ಬಂದರು ನಿಂದ ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಮಾರ್ಗ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು ಸ್ಥಳಕ್ಕೆ ಧಾವಿಸಿದ ಡಿ.ವೈ.ಎಸ್.ಪಿ ಶ್ರೀಕಾಂತ್, ವೃತ್ತ ನೀರಿಕ್ಷಕ ಸಂತೋಷ್ ಕಾಯ್ಕಿಣಿ ಘಟನೆ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.
ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿತ್ತು.