- Advertisement -
- Advertisement -
ಉಡುಪಿ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು, ಅಂಬೇಡ್ಕರ್ ಆವಾಜ್ ಮನೆ ನಿರ್ಮಾಣಕ್ಕಾಗಿ 7 ಲಕ್ಷ ನೀಡುವುದಾಗಿ ಘೋಷಿಸಿದ್ದರೂ ಇನ್ನೂ ಅನುಷ್ಠಾನಗೊಳಿಸಿಲ್ಲ. ಅನುಷ್ಠಾನಗೊಳಿಸದಿದ್ದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮನೆ ನಿರ್ಮಾಣಕ್ಕಾಗಿ 7 ಲಕ್ಷ ಸಹಾಯಧನ ನೀಡುವುದಾಗಿ ಸಚಿವರು ಅಧಿಕೃತವಾಗಿ ಘೋಷಿಸಬೇಕು. ಇಲ್ಲದಿದ್ದರೆ ಸಚಿವರ ಮನೆ ಮುಂದೆ ಮಾರ್ಚ್ 26 ರಂದು ಬೃಹತ್ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
- Advertisement -