Monday, June 30, 2025
Homeಕರಾವಳಿಕಾಸರಗೋಡುಎಂ .ಸಿ ಕಮರುದ್ದೀನ್‌ ಜಾಮೀನು ಅರ್ಜಿ ಇಂದು ವಿಚಾರಣೆ!.. ಹೊರಬರ್ತಾರ ಮಂಜೇಶ್ವರ ಶಾಸಕ?

ಎಂ .ಸಿ ಕಮರುದ್ದೀನ್‌ ಜಾಮೀನು ಅರ್ಜಿ ಇಂದು ವಿಚಾರಣೆ!.. ಹೊರಬರ್ತಾರ ಮಂಜೇಶ್ವರ ಶಾಸಕ?

spot_img
- Advertisement -
- Advertisement -

ಕಾಸರಗೋಡು: ಮಂಜೇಶ್ವರ ಶಾಸಕ ಎಂ .ಸಿ ಕಮರುದ್ದೀನ್‌ ಫ್ಯಾಶನ್ ಜುವೆಲ್ಲರಿ ವಂಚನೆ ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.ಫ್ಯಾಶನ್ ಗೋಲ್ಡ್ ಇಂಟರ್ ನ್ಯಾಷನಲ್ ಕಂಪೆನಿ ಹೆಸರಿನಲ್ಲಿ ಸುಮಾರು 120 ಕೋಟಿ ರೂ. ಗಳಷ್ಟು ವಂಚನೆ ನಡೆದಿದ್ದು, ಸುಮಾರು 700 ಮಂದಿಯಿಂದ ಠೇವಣಿ ಪಡೆಯಲಾಗಿದೆ.

ಈ ಪೈಕಿ 115 ಪ್ರಕರಣಗಳು ಈಗಾಗಲೇ ದಾಖಲಾಗಿದ್ದು, 15ಕೋಟಿ ರೂ. ಗಳ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಭಂದ ನಾಲ್ಕು ಪ್ರಕರಣಗಳಲ್ಲಿ ಕಮರುದ್ದೀನ್‌ರನ್ನು ಬಂಧಿಸಲಾಗಿದೆ. ಅವರು ಜಾಮೀನು ಕೋರಿ ಹೊಸದುರ್ಗ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

- Advertisement -
spot_img

Latest News

error: Content is protected !!