Saturday, May 18, 2024
Homeತಾಜಾ ಸುದ್ದಿಕಾಂಗ್ರೆಸ್ ಗೆ ಟಾಟಾ ಹೇಳಿದ ಮಾಜಿ ಎಂಎಲ್ಸಿ ಎಂ ಡಿ ಲಕ್ಷ್ಮೀನಾರಾಯಣ ನಾಳೆ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಗೆ ಟಾಟಾ ಹೇಳಿದ ಮಾಜಿ ಎಂಎಲ್ಸಿ ಎಂ ಡಿ ಲಕ್ಷ್ಮೀನಾರಾಯಣ ನಾಳೆ ಬಿಜೆಪಿ ಸೇರ್ಪಡೆ

spot_img
- Advertisement -
- Advertisement -

ಬೆಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಗೆ ಟಾಟಾ ಹೇಳಿದ್ದ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ ಅವರು ನಾಳೆ (ಸೆ.10ರಂದು) ಅಧಿಕೃತವಾಗಿ  ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಅಂದ್ಹಾಗೆ ದಿನಾಂಕ 31-08-2022ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಅವರಿಗೆ ಪತ್ರ ಬರೆದಿದ್ದ ಅವರು, ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು, ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ತಿಳಿಸಿದ್ದರು. ಈ ಬಳಿಕ ಇದೀಗ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರೋದಾಗಿ ಘೋಷಣೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!