- Advertisement -
- Advertisement -
ಮಂಗಳೂರು: ಫೆಬ್ರವರಿ 11 ಕ್ಕೆ ಪುತ್ತೂರಿಗೆ ಅಮಿತ್ ಶಾ ಪುತ್ತೂರಿಗೆ ಭೇಟಿ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿರಲಿದ್ದಾರೆ.
ಫೆಬ್ರವರಿ 11 ರಂದು ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ತೆಂಕಿಲದಲ್ಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಪರಾಹ್ನ 3 ಗಂಟೆಗೆ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಇದರಲ್ಲಿ ಶಾ ಭಾಗಿಯಾಗಲಿದ್ದಾರೆ. ಅಲ್ಲದೇ ಅಮಿತಾ ಶಾ ಅವರು ಕ್ಯಾಂಪ್ಕೋ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ.
- Advertisement -