- Advertisement -
![]()
- Advertisement -
ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘ, ಕರ್ನಾಟಕ ಇದರ ಸಂಘದ ನೊಂದಣಿ ಹಾಗೂ ಪುನಾರಚನೆ ಮಾಡಲು ತೀರ್ಮಾನಿಸಿದ್ದು, ಪೂರ್ವ ತಯಾರಿಯಾಗಿ ಬೈಲಾ ರಚನಾ ಸಭೆಯನ್ನು ಆ. 24 ರಂದು ಬೆಳಿಗ್ಗೆ 10.30 ಘಂಟೆಗೆ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ ಸಮುದಾಯ ಭವನದಲ್ಲಿ ಕರೆಯಲಾಗಿದೆ.
ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳು, ನಾನಾ ಜಿಲ್ಲಾ ಸಂಘದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ನಾನಾ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಆಸಕ್ತರು ಸಮಯಕ್ಕೆ ಸರಿಯಾಗಿ ಉಪಸ್ಥಿತರಿದ್ದು, ಸಹಕರಿಸಬೇಕಾಗಿ ರಾಜ್ಯ ಮಲೆಕುಡಿಯ ಸಂಘ, ಕರ್ನಾಟಕ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -


