- Advertisement -
- Advertisement -
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು. ಈ ವೇಳೆ ಅವರನ್ನು ಲೂದಿಯಾನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಸಂಸದ ಸಂತೋಖ್ ಸಿಂಗ್ ಚೌಧರಿ ಸಾವನ್ನಪ್ಪಿದ್ದಾರೆ.
ಜಲಂಧರ್ ಲೋಕಸಭಾ ಕ್ಷೇತ್ರದ ಸಂಸದ ಸಂತೋಷ್ ಸಿಂಗ್ ಚೌಧರಿ ಅವರು ಶನಿವಾರ ಬೆಳಗ್ಗೆ ಪಂಜಾಬ್ನ ಲೂದಿಯಾನದಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದರು.
- Advertisement -