Monday, June 30, 2025
Homeಕರಾವಳಿಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ಅನುದಾನ ಮಂಜೂರು ಹಿನ್ನೆಲೆ: ಶಾಸಕ...

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ಅನುದಾನ ಮಂಜೂರು ಹಿನ್ನೆಲೆ: ಶಾಸಕ ಹರೀಶ್ ಪೂಂಜ ಅವರನ್ನು ಭೇಟಿಯಾದ ಬೆಳ್ತಂಗಡಿ ವರ್ತಕರ ಸಂಘದ ಸದಸ್ಯರು

spot_img
- Advertisement -
- Advertisement -

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಪಡಿಸಲು 718 ಕೋ ರೂ ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ನಡೆದು ನವೆಂಬರ್ ತಿಂಗಳಿನಿಂದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.  ಆದರೆ ಇದರ ಸರಿಯಾದ ಚಿತ್ರಣ  ಇನ್ನೂ ಯಾರಿಗೂ ಸಿಕ್ಕಿಲ್ಲ.  ರಸ್ತೆ ಎಷ್ಟು ಅಗಲ ರಸ್ತೆ ಇದೆ ಈ ಬಗ್ಗೆ ಸಾರ್ವಜನಿಕರಿಗೆ ಉದ್ಯಮಿಗಳಿಗೆ ಹಾಗೂ ವ್ಯಾಪಾರಸ್ಥರಿಗೆ ಗೊಂದಲ ಇದೆ. ಹಾಗಾಗಿ ಈ ನಿಟ್ಟಿನಲ್ಲಿ ಸರಿಯಾದ ಮಾಹಿತಿ ನೀಡುವ ಉದ್ದೇಶದಿಂದ ಸಂಸದರು ಶಾಸಕರು ಸೇರಿದಂತೆ ಅಧಿಕಾರಿಗಳನ್ನೊಳಗೊಂಡ ಸಾರ್ವಜನಿಕ ಮಾಹಿತಿ ಸಭೆಯನ್ನು ಕರೆಯಬೇಕು ಬೆಳ್ತಂಗಡಿ ವರ್ತಕರ ಸಂಘ ಶಾಸಕ ಹರೀಶ್ ಪೂಂಜ ಅವರಿಗೆ ಮನವಿ ಸಲ್ಲಿಸಿತು.

ಅದಲ್ಲದೇ ಈಗಾಗಲೇ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಇದನ್ನೂ ದುರಸ್ತಿಗೊಳಿಸುವಂತೆ ಮನವಿ ಮಾಡಲಾಯಿತು. ಈ ಬಗ್ಗೆ ಸ್ಪಂದಿಸಿದ ಶಾಸಕರು ಶೀಘ್ರವೇ ಸಭೆ ಕರೆಯಲಾಗುವುದು. ಅದಕ್ಕಾಗಿ ದಿನ ನಿಗದಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು . ಅದಲ್ಲದೇ ರಸ್ತೆ ಅಗಲೀಕರಣ ಸಂದರ್ಭ ಸ್ವಾಧೀನ ಪಡಿಸಿಕೊಂಡ ಜಾಗಕ್ಕೆ ಪರಿಹಾರದ ಮೊತ್ತ ಸಮರ್ಪಕವಾಗಿ ನೀಡುವಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.    ಅದೇ ರೀತಿ ಮಳೆಯಿಂದಾಗಿ ಹೆದ್ದಾರಿ ದುರಸ್ತಿ ಕೆಲಸ ತಡವಾಗಿದೆ  ಇದರ ಕೆಲಸವನ್ನೂ ಮಳೆ ಕಡಿಮೆಯಾದ ಕೂಡಲೇ ಮಾಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪದಾಧಿಕಾರಿಗಳಾದ  ಜಯಾನಂದ ಗೌಡ, ಶೀತಲ್ ಜೈನ್, ಶಶಿಧರ್ ಪೈ, ಚಿದಾನಂದ ಇಡ್ಯಾ, ರೋನಾಲ್ಡ್ ಲೋಬೋ,ಯೇಸುದಾಸ್, ಕೃಷ್ಣ ಭಟ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!