- Advertisement -
- Advertisement -
ಮಂಗಳೂರು (ಸೆಪ್ಟೆಂಬರ್ 16, 2026): ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ (KDP) ಸದಸ್ಯರು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಜಿಲ್ಲೆಯ ಪ್ರಮುಖ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಬರುವ ಸೆಪ್ಟೆಂಬರ್ 18, 2026 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕೆಳಗಿನ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ, ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸುವಂತೆ ಸಚಿವರಿಗೆ ವಿನಂತಿಸಲಾಯಿತು:
- ನಮೂನೆ 9 ಮತ್ತು 11 ರ ಸಮಸ್ಯೆ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಫಾರಂ 9 ಮತ್ತು 11 ರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದು.
- ಗಣಿಗಾರಿಕೆ ವಿಚಾರ: ಜಿಲ್ಲೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಎದುರಾಗಿರುವ ತೊಡಕುಗಳನ್ನು ಬಗೆಹರಿಸುವುದು.
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದು.
ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಮೆಲ್ವಿನ್ ಡಿಸೋಜ, ಸಂತೋಷ್ ಕುಮಾರ್ ಲಾಯಿಲ, ಪ್ರವೀಣ್ ಕುಮಾರ್ ಮೂಡಬಿದ್ರೆ, ಸುಜಯಕೃಷ್ಣ ಸುಳ್ಳ ಹಾಗೂ ಹಮೀದ್ ಕಿನ್ಯ ಅವರು ಉಪಸ್ಥಿತರಿದ್ದರು.
- Advertisement -


