- Advertisement -
- Advertisement -
ನವದೆಹಲಿ: ಆಳ ಸಮುದ್ರದ ಮೀನುಗಾರಿಕೆಯ ಗಿಲ್ ನೆಟ್ ದೋಣಿಗಳ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.
ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ನವದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಇಲಾಖೆ ಸಚಿವ ಪರ್ಷೋತ್ತಮ ರೂಪಾಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಆಳ ಸಮುದ್ರ ಮೀನುಗಾರಿಕೆಯ ಗಿಲ್ ನೆಟ್ ದೋಣಿಗಳ ವಿನ್ಯಾಸ ಬದಲಾವಣೆಗೆ ಮನವಿ ಮಾಡಲಾಗಿದೆ.
ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವರ ಭೇಟಿಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- Advertisement -