Sunday, June 29, 2025
Homeತಾಜಾ ಸುದ್ದಿ1 ತಿಂಗಳೊಳಗೆ ಎಲ್ಲಾ ಗುತ್ತಿಗೆ ವೈದ್ಯರನ್ನು ಕಾಯಂ ಮಾಡಲಾಗುವುದು: ಸಚಿವ ಶ್ರೀರಾಮುಲು

1 ತಿಂಗಳೊಳಗೆ ಎಲ್ಲಾ ಗುತ್ತಿಗೆ ವೈದ್ಯರನ್ನು ಕಾಯಂ ಮಾಡಲಾಗುವುದು: ಸಚಿವ ಶ್ರೀರಾಮುಲು

spot_img
- Advertisement -
- Advertisement -

ಬೆಂಗಳೂರು: ಗುತ್ತಿಗೆ ವೈದ್ಯರನ್ನು ಒಂದು ತಿಂಗಳೊಳಗೆ ಕಾಯಂ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆ ವೈದ್ಯರನ್ನು ಕಾಯಂ ಮಾಡಿಕೊಳ್ಳಲು ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ. ಹೀಗಾಗಿ ಒಂದು ತಿಂಗಳೊಳಗೆ ಕಾಯಂ ಮಾಡಲಾಗುವುದು, ಇದನ್ನು ಗುತ್ತಿಗೆ ವೈದ್ಯರು ಸಹ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಗುತ್ತಿಗೆ ವೈದ್ಯರು ಇದನ್ನು ಒಪ್ಪಿಕೊಂಡಿದ್ದು, ಸಹ ಇಂದಿನಿಂದಲೇ ಕರ್ತವ್ಯಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ವೈದ್ಯ ಸಿಬ್ಬಂದಿ ಕಾಯಂಗೊಳಿಸಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದು, ಗುತ್ತಿಗೆ ವೈದ್ಯರಿಗೆ ಸರ್ಕಾರ 45 ಸಾವಿರದಿಂದ 60 ಸಾವಿರಕ್ಕೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

- Advertisement -
spot_img

Latest News

error: Content is protected !!