Friday, June 27, 2025
Homeತಾಜಾ ಸುದ್ದಿಯಡಿಯೂರಪ್ಪ ಪತ್ನಿಯ ಸಾವಿನ ತನಿಖೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕು; ಬೆಂಗಳೂರಿನಲ್ಲಿ ಸಚಿವ ಭೈರತಿ ಸುರೇಶ್...

ಯಡಿಯೂರಪ್ಪ ಪತ್ನಿಯ ಸಾವಿನ ತನಿಖೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕು; ಬೆಂಗಳೂರಿನಲ್ಲಿ ಸಚಿವ ಭೈರತಿ ಸುರೇಶ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನ ವಿಚಾರ ತನಿಖೆಯಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸಬೇಕೆಂದು ಹೇಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಮಾತನಾಡಿದ ಸಚಿವ ಸುರೇಶ್,
ಶೋಭಾ ಕರಂದ್ಲಾಜೆ ಗಾಳಿಯಲ್ಲಿ ಗುಂಡು ಹಾಕುವುದನ್ನು ಬಿಡಬೇಕು, ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಅಂತ ನಾನೂ ಆರೋಪ ಮಾಡುತ್ತೇನೆ ಎಂದು ಹೇಳಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಶೋಭಾ ಕರಂದ್ಲಾಜೆ, ಮುಡಾ ಸೈಟ್ ಪ್ರಕರಣದಲ್ಲಿ ಸಚಿವ ಭೈರತಿ ಸುರೇಶ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು.‌

ಇದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿರುವ ಸಚಿವ ಸುರೇಶ್ ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ಇನ್ನು ಶೋಭಾ ಕರಂದ್ಲಾಜೆ ವಿರುದ್ಧದ ಸಚಿವ ಭೈರತಿ ಸುರೇಶ್ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!