- Advertisement -
- Advertisement -
ಬೆಂಗಳೂರು: ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡಾ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು
ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಮಗೆ ಮತ ನೀಡಿದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇವೆ, ಅಲ್ಲಿನ ಶ್ರಮದ ಸಾರ್ಥಕತೆಯನ್ನು ಕರ್ನಾಟಕದಲ್ಲೂ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲೂ ನಿಶ್ಚಯವಾಗಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಕೋಟ ಶ್ರೀನಿವಾಸ ಪೂಜಾರಿ, ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂದು ಪಕ್ಷ ನಿರ್ಧಾರ ಮಾಡಲಿದೆ, ಆದರೆ ಬಿಜೆಪಿ ಗೆಲ್ಲುತ್ತದೆ ಅನ್ನೋದನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.
- Advertisement -