- Advertisement -
- Advertisement -
ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಬ್ಬರ ಮತ್ತೆ ಹೆಚ್ಚಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಹೊಸ ಕೋವಿಡ್-19 ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಕರ್ನಾಟಕದಲ್ಲಿ ಕೊರೊನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.
ಈ ಕುರಿತು ಸಚಿವರು ಟ್ವೀಟ್ ಮಾಡಿದ್ದು, “ಕೋವಿಡ್ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ” ಎಂದು ತಿಳಿಸಿದ್ದಾರೆ.
- Advertisement -