- Advertisement -
- Advertisement -
ಬೆಂಗಳೂರು: ನಮ್ಮ ಸರ್ಕಾರ ಬಂದ್ರೆ ಗೋ ಹತ್ಯೆ ನಿಷೇಧ ಕಾಯ್ದೆ ತೆಗೆದು ಹಾಕುವ ಕುರಿತಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಭು ಚೌಹಾಣ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸವಾಲು ಹಾಕಿದ್ದಾರೆ.
ನೀ ಯಾರಪ್ಪ ಗೋ ಹತ್ಯೆ ನಿಷೇಧ ಕಾಯಿದೆ ತೆಗೆಯುತ್ತೇನೆ ಅನ್ನೋಕೆ? ಬೀಫ್ ತಿನ್ನುತ್ತೇನೆ, ಹಸು ತಿನ್ನುತ್ತೇನೆ ಅಂತೀರಲ್ಲಾ
ತಾಕತ್ ಇದ್ರೆ ನನ್ನ ಎದುರುಗಡೆ ಹಸು ಕಟ್ ಮಾಡಿ ತಿನ್ನಿ, ನಿಮ್ಮನ್ನು ಒಳಗಡೆ ಹಾಕಿಸ್ತೀನಿ ಎಂದು ಸಚಿವ ಚೌಹಾಣ್ ಸವಾಲು ಹಾಕಿದ್ದಾರೆ.
ಅಲ್ಲದೇ, ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಮುಸ್ಲಿಂ ಮತಗಳು ತಪ್ಪಿ ಹೋಗಬಹುದು ಎಂಬ ಭೀತಿಯಿಂದಾಗಿ ಕಾಂಗ್ರೆಸ್ ಪಕ್ಷ ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡುತ್ತಿದೆ ಎಂದೂ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
- Advertisement -