- Advertisement -
- Advertisement -
ಉಡುಪಿ: ಅಲ್ ಖೈದಾವನ್ನು ಆರೆಸ್ಸೆಸ್ ಗೆ ಹೋಲಿಸಿದ ಸಿದ್ಧರಾಮಯ್ಯರನ್ನು ನಿಮ್ಹಾನ್ಸ್ ಗೆ ಸೇರಿಸಿದರೆ ಕಾಂಗ್ರೆಸ್ ಪಕ್ಷ ಉಳಿಯುತ್ತೆ ಎಂದು ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ ಸಿದ್ದರಾಮಯ್ಯನವರು ಜವಾಬ್ದಾರಿ ಹೊತ್ತ ವಿಪಕ್ಷನಾಯಕ. ಮೇಲಾಗಿ ಅವರೊಬ್ಬ ವಕೀಲರು. ಅಂಥವರು ಅಲ್ ಖೈದಾ ಸಂಘಟನೆಯನ್ನು ಆರ್ ಎಸ್ಎಸ್ ಜೊತೆ ಹೋಲಿಕೆ ಮಾಡುತ್ತಾರೆ.ಅವರ ಈ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆಯೇ? ಎಂಬುದನ್ನು ಸ್ಪಷ್ಟಪಡಿಸಬೇಕು. ಆರಗ ಜ್ಞಾನೇಂದ್ರ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಆದರೆ ಸಿದ್ದರಾಮಯ್ಯನವರು ಕ್ಷಮೆಯಾಚಿಸುತ್ತಾರಾ ಎಂಬುದು ಪ್ರಶ್ನೆ ಎಂದು ಹೇಳಿದ್ದಾರೆ.
- Advertisement -