Thursday, May 16, 2024
Homeತಾಜಾ ಸುದ್ದಿಕರಾವಳಿ ಜಿಲ್ಲೆಗಳಲ್ಲಿ ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಕ್ರಮ; ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್...

ಕರಾವಳಿ ಜಿಲ್ಲೆಗಳಲ್ಲಿ ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಕ್ರಮ; ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ನೇತೃತ್ವದಲ್ಲಿ ಸಭೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಕಾರ್ಕಳ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.


ಈ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉಭಯ ಜಿಲ್ಲೆಗಳಲ್ಲಿನ ಪ್ರಮುಖ ಸಮಸ್ಯೆಗಳಾದ ವಾಸ್ತವ್ಯ ಹಾಗೂ ವಾಣಿಜ್ಯ ಉದ್ದೇಶದ ಭೂ ಪರಿವರ್ತನೆ ವಿಳಂಬ, 9/11 ಸಮಸ್ಯೆ, ಭೂ ಪರಿವರ್ತಿತ ಗ್ರಾಮೀಣ ಭಾಗದ ನಿವೇಶನಗಳಿಗೆ ಅನುಮತಿ ನೀಡುವ ಅಧಿಕಾರವನ್ನು ನಗರ ಪ್ರಾಧಿಕಾರಕ್ಕೆ ವರ್ಗಾವಣೆಯಿಂದಾದ ಸಮಸ್ಯೆಗಳ ಬಗ್ಗೆ ಮತ್ತು  ಪ್ರಮುಖವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ವಾಸ್ತವ್ಯ ಹಾಗೂ ವಾಣಿಜ್ಯ ಉದ್ದೇಶಕ್ಕೆ 10 ಸೆಂಟ್ಸ್‌ವರೆಗಿನ ಭೂ ಪರಿವರ್ತನೆಯನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

- Advertisement -
spot_img

Latest News

error: Content is protected !!