Monday, April 29, 2024
Homeಕರಾವಳಿಮಂಗಳೂರಿನಲ್ಲಿ ಕಾಂತಾರ ಸಿನಿಮಾ ಪ್ರದರ್ಶನದ ವೇಳೆ ನಡೆಯಿತೊಂದು ವಿಸ್ಮಯ; ಪ್ರೇಕ್ಷಕನ ಮೇಲೆ ದೈವದ ಆವಾಹನೆ

ಮಂಗಳೂರಿನಲ್ಲಿ ಕಾಂತಾರ ಸಿನಿಮಾ ಪ್ರದರ್ಶನದ ವೇಳೆ ನಡೆಯಿತೊಂದು ವಿಸ್ಮಯ; ಪ್ರೇಕ್ಷಕನ ಮೇಲೆ ದೈವದ ಆವಾಹನೆ

spot_img
- Advertisement -
- Advertisement -

ಮಂಗಳೂರು; ಸದ್ಯ ದಕ್ಷಿಣಭಾರತದಾದ್ಯಂತ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಸಿನಿಮಾ ನೋಡಿದ ಮಂದಿಯ ಬಾಯಲ್ಲಿ ಬರೀ ಅದರದ್ದೇ ಮಾತು. ಅಪ್ಪಟ ಕರಾವಳಿ ಸೊಗಡಿನ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಜಾದು ಮಾಡಿದೆ. ದೈವಾರಾಧನೆ, ಕಂಬಳ, ಕರಾವಳಿಯ ಸಂಸ್ಕೃತಿಯ ಸುತ್ತ ಸುತ್ತುವ ಈ  ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆಯೋದರಲ್ಲಿ ಯಾವುದೇ ಸಂದೇಹವಿಲ್ಲ. ರಿಷಭ್ ಶೆಟ್ಟಿ ಈ ಸಿನಮಾದ ಮೂಲಕ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕರೆದೊಯ್ದಿದ್ದಾರೆ.

ಇನ್ನು ಕಾಂತಾರ ಸಿನಿಮಾದ ಕ್ಲೈಮಾಕ್ಸ್‌ ಒಬ್ಬ ಪ್ರೇಕ್ಷಕನನ್ನು ಎಷ್ಟರ ಮಟ್ಟಿಗೆ ಆವರಿಸಿಕೊಳ್ಳುತ್ತದೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ವಿಶೇಷ ಘಟನೆಯೊಂದು ಸಾಕ್ಷಿಯಾಗಿದೆ. ಮಂಗಳೂರಿನ ಪಿವಿಆರ್ ಚಿತ್ರಮಂದಿರದಲ್ಲಿ ಶುಕ್ರವಾರ ನಾಲ್ಕನೇ ಶೋನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕನ ಮೈ ಮೇಲೆ ದೈವ ಆವಾಹನೆ ಆಗಿದೆ. ಸಿನಿಮಾ ನೋಡುತ್ತಿದ್ದ ವ್ಯಕ್ತಿ ಏಕಾಏಕಿ ದೈವ ಆವಾಹನೆ ಆದಂತೆ ವರ್ತಿಸಿದ್ದು, ಸ್ಥಳದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಪ್ರೇಕ್ಷನ ವರ್ತನೆ ಕಂಡು ಜನ ಗಾಬರಿಗೊಂಡಿದ್ದಾರೆ. ಈ ವೇಳೆ ಕೂಡಲೇ ಸಿನಿಮಾವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು 10 ನಿಮಿಷದ ಬಳಿಕ ವ್ಯಕ್ತಿ ಚೇರಿಸಿಕೊಂಡಿದ್ದು ಮತ್ತೆ ಸಿನಿಮಾ ಮುಂದುವರಿಸಲಾಗಿದೆ.


- Advertisement -
spot_img

Latest News

error: Content is protected !!