Saturday, April 20, 2024
Homeಕರಾವಳಿಉಪ್ಪಿನಂಗಡಿಯಲ್ಲಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ರಿಕ್ಷಾ ಕಳವು : ಕೊರಗಜ್ಜನ ಮೊರೆ ಹೋದ ಮಾಲೀಕನಿಗೆ ಮೂರೇ ದಿನದಲ್ಲಿ...

ಉಪ್ಪಿನಂಗಡಿಯಲ್ಲಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ರಿಕ್ಷಾ ಕಳವು : ಕೊರಗಜ್ಜನ ಮೊರೆ ಹೋದ ಮಾಲೀಕನಿಗೆ ಮೂರೇ ದಿನದಲ್ಲಿ ಸಿಕ್ತು ಆಟೋ

spot_img
- Advertisement -
- Advertisement -

ಉಪ್ಪಿನಂಗಡಿಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಆಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದಿದ್ದರು. ಇದರಿಂದ ಕಂಗಲಾದ ಆಟೋ ಮಾಲೀಕ ಕೊರಗಜ್ಜನ ಮೊರೆ ಹೋಗಿದ್ದರು. ಇದೀಗ ಕಳವಾದ ಆಟೋ ಪತ್ತೆಯಾಗಿದೆ.

ಉಪ್ಪಿನಂಗಡಿಯ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದರು.  ಶನಿವಾರ ಮುಂಜಾನೆ ಎದ್ದು ನೋಡಿದಾಗ ರಿಕ್ಷಾ ಕಳ್ಳತನವಾಗಿರುವುದು ಗೊತ್ತಾಗಿದೆ.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ ಕೊರಗಜ್ಜ ದೈವಕ್ಕೆ ಮೊರೆ ಹೋಗಿದ್ದು, ಅವರ ಪ್ರಾರ್ಥನೆಯ ಫಲವೇನೋ ಎಂಬಂತೆ ಕಳವಿಗೀಡಾದ ಅಟೋ ರಿಕ್ಷಾವು ನಿನ್ನೆ ಉಪ್ಪಿನಂಗಡಿ ಪರಿಸರದಲ್ಲಿ ಸಂಚರಿಸುತ್ತಿದ್ದಾಗ ಅಟೋ ಚಾಲಕರು ಅದನ್ನು ಗುರುತಿಸಿ ಅಡ್ಡಗಟ್ಟಿ ಪೊಲೀಸರಿಗೊಪ್ಪಿಸಿದ್ದಾರೆ. 

ಸದ್ರಿ ಅಟೋ ರಿಕ್ಷಾವನ್ನು ಚಲಾಯಿಸುತ್ತಿದ್ದ ವ್ಯಕ್ತಿಗೆ ಕಡಬ ತಾಲೂಕಿನ ಬಿಳಿನೆಲೆಯ ಸ್ನೇಹಿತನೋರ್ವ ಇದನ್ನು ನೀಡಿರುವುದೆಂದೂ, ತಾನು ತನ್ನ ಕುಟುಂಬಸ್ಥರನ್ನು ಔಷಧಕ್ಕೆಂದು ಉಪ್ಪಿನಂಗಡಿಗೆ ಕರೆತರುತ್ತಿದ್ದಾಗ ಉಳಿದ ಅಟೋ ರಿಕ್ಷಾದವರು ಉಪ್ಪಿನಂಗಡಿ ಪರಿಸರದಲ್ಲಿ ಅಡ್ಡಗಟ್ಟಿದ್ದಾರೆಂದೂ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಬಿಳಿನೆಲೆಯ ವ್ಯಕ್ತಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!