Friday, May 17, 2024
Homeಕರಾವಳಿಬೆಳ್ತಂಗಡಿ: ಮುಂಡಾಜೆಯ  ಮನೆಯೊಂದರ ನೆಲ ಮಾಳಿಗೆಯಲ್ಲಿಟ್ಟಿದ್ದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್; ಎರಡೇ ದಿನಗಳಲ್ಲಿ ಚಿನ್ನಾಭರಣ...

ಬೆಳ್ತಂಗಡಿ: ಮುಂಡಾಜೆಯ  ಮನೆಯೊಂದರ ನೆಲ ಮಾಳಿಗೆಯಲ್ಲಿಟ್ಟಿದ್ದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್; ಎರಡೇ ದಿನಗಳಲ್ಲಿ ಚಿನ್ನಾಭರಣ ದೂರುದಾರರ ಮನೆಯಂಗಳದಲ್ಲಿ ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ: ಮುಂಡಾಜೆಯ  ಮನೆಯೊಂದರ ನೆಲ ಮಾಳಿಗೆಯಲ್ಲಿಟ್ಟಿದ್ದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎರಡೇ ದಿನಗಳಲ್ಲಿ ಚಿನ್ನಾಭರಣ ದೂರುದಾರರ ಮನೆಯಂಗಳದಲ್ಲಿ ಪತ್ತೆಯಾಗಿದ್ದು ಅನುಮಾನ ಮೂಡಿಸಿದೆ.

 ಮುಂಡಾಜೆ ಗ್ರಾಮದ ಕಡಂಬಳ್ಳಿ  ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ಚಿನ್ನಾಭರಣ ದೂರುದಾರರ ಮನೆಯಂಗಳದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಇಲ್ಲಿನ ಪ್ರಮೋದ ವಿ.ಭಿಡೆ ಎಂಬವರು ತಮ್ಮ ಮನೆಯ ಸಾರಣೆ ಹಾಗೂ ಪೈಂಟಿಂಗ್ ಕೆಲಸವನ್ನು ಕಾರ್ಮಿಕರ ಮೂಲಕ ಜು.5 ರಂದು ಆರಂಭಿಸಿದ್ದು ಇದಕ್ಕೆ ಮೊದಲು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಕೋಣೆಗೆ ಬೀಗ ಹಾಕದೆ ಇರಿಸಿದ್ದರು.10ರಿಂದ 13 ಮಂದಿ ಕಾರ್ಮಿಕರು ಜು.19ರಂದು ಕಾಮಗಾರಿ ಮುಗಿಸಿ ತೆರಳಿದ್ದರು.

ಬಳಿಕ ಸೆ.12ರಂದು ಕಾರ್ಯಕ್ರಮಕ್ಕೆ ತೆರಳುವ ವೇಳೆ ಆಭರಣ ಧರಿಸಲು ಆಭರಣ ಇರಿಸಲಾಗಿದ್ದ ಸ್ಥಳಕ್ಕೆ ಹೋಗಿ ನೋಡಿದಾಗ, ಸುಮಾರು 5 ಲಕ್ಷ ರೂ. ಮೌಲ್ಯದ 122 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪ್ರಕರಣದ ಕುರಿತು ಕೆಲವರನ್ನು ಠಾಣೆಗೆ ಕರೆಯಿಸಿ ತನಿಖೆ ನಡೆಸಿದ್ದರು.

ಪೊಲೀಸ್ ತನಿಖೆ ಚುರುಕುಗೊಳ್ಳುತ್ತಿದ್ದಂತೆ ನಾಪತ್ತೆಯಾಗಿದ್ದ  ಚಿನ್ನಾಭರಣ ಶುಕ್ರವಾರ ಬೆಳಿಗ್ಗೆ ಪ್ರಮೋದ ವಿ. ಭಿಡೆಯವರ ಮನೆ ಅಂಗಳದಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ತಂಡದವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳವಾದ ಚಿನ್ನಾಭರಣ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

- Advertisement -
spot_img

Latest News

error: Content is protected !!