Monday, June 30, 2025
Homeಕರಾವಳಿನಾಪತ್ತೆಯಾಗಿದ್ದ ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ಧರ್ಮಸ್ಥಳದಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ಧರ್ಮಸ್ಥಳದಲ್ಲಿ ಪತ್ತೆ!

spot_img
- Advertisement -
- Advertisement -

ಮಂಗಳೂರು: ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಂತ ಗಿರಿರಾಜ್ ಅವರು, ಡೆತ್ ನೋಟ್ ಬರೆದಿಟ್ಟು ದಿಢೀರ್ ನಾಪತ್ತೆಯಾಗಿದ್ದು, ಇದೀಗ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಒಂದು ವಾರದ ಬಳಿಕ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.

ಮೇಲಧಿಕಾರಿಗಳ ಕಿರುಕುಳ ಕಾರಣದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್​ನೋಟ್​ ಬರೆದಿಟ್ಟು ಎಫ್​ಡಿಎ ಗಿರಿರಾಜ್ ನಾಪತ್ತೆಯಾಗಿದ್ದ. ಹೀಗೆ ನಾಪತ್ತೆಯಾದ ವ್ಯಕ್ತಿಯನ್ನು ಪೊಲೀಸರು ಹಲವು ಆಯಾಮಗಳಿಂದ ಶೋಧ ನಡೆಸುತ್ತಿದ್ದರು ಆದರೂ ಆತನ ಸುಳಿವು ಸಿಕ್ಕಿರಲಿಲ್ಲ.

ಧರ್ಮಸ್ಥಳದಲ್ಲಿ ಇವರನ್ನು ರಾಜ್ಯಧ್ಯಕ್ಷರಾದ ಷಡಕ್ಷರಿಯವರ ಸಲಹೆ ಸೂಚನೆಯಂತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಿಶೇಷ ಸಹಕಾರದೊಂದಿಗೆ ಎಸ್.ಡಿ.ಎಂ ಆಸ್ಪತ್ರೆ ಉಜಿರೆಗೆ ತಾಲೂಕು ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಜಯಕೀರ್ತಿ ಜೈನ್ ಅವರು ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಶಿವಮೊಗ್ಗ ಇಲಾಖೆಯ ಅಧಿಕಾರಿಗಳು ಹಾಗೂ ಮನೆಯವರು ಆಸ್ಪತ್ರೆಗೆ ಬಂದು ಕರೆದುಕೊಂಡು ಹೋಗಿದ್ದಾರೆ.

- Advertisement -
spot_img

Latest News

error: Content is protected !!