- Advertisement -
- Advertisement -
ಸುಬ್ರಮಣ್ಯ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ನಡೆದಿದೆ.ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತ ಯುವಕ.ಅಶೋಕ್ ಅವರು ಆಗಸ್ಟ್ 4 ರಂದು ನಾಪತ್ತೆಯಾಗಿದ್ದರು. ಮೂರು ದಿನದಿಂದ ನಿರಂತರ ಹುಡುಕಾಟ ನಡೆಸಿದಾಗ ಇಂದು ಮೃತದೇಹ ಪತ್ತೆಯಾಗಿದೆ.
ಸುಳ್ಯದ ಮುಳುಗು ತಜ್ಞರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಇಂದು ಮಧ್ಯಾಹ್ನ ವೇಳೆಗೆ ಮೃತದೇಹ ಪತ್ತೆಯಾಗಿದೆ.
- Advertisement -