ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕ್ರಾಂತಿ ಪುರುಷರು ಕೋಟಿ-ಚೆನ್ನಯರ ಹೆಸರನ್ನು ಇಡಬೇಕು ಅನ್ನೋ ಕೂಗು ಆಗಾಗ್ಗೆ ಕೇಳಿ ಬರುತ್ತಲೇ ಇದೆ.ಇದೀಗ ಈ ವಿಚಾರಕ್ಕೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಚರ್ಚೆಗೆ ಗ್ರಾಸವಾಗಿದ್ದಾರೆ.
ಹೌದು.. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯಿಂದ ಸುಸ್ವಾಗತ, ಕೋಟಿ-ಚೆನ್ನಯರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂಬ ಕಟೌಟ್ ಅನ್ನು ವಿಮಾನ ನಿಲ್ದಾಣಕ್ಕೆ ಹೋಗುವ ಕೆಂಜಾರು ಸಮೀಪದ ದಾರಿಯಲ್ಲಿ ಅಳವಡಿಸಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು ಹಾಗೂ ಇನ್ನಿತರ ಇತಿಹಾಸ, ರಾಜಕೀಯ ವ್ಯಕ್ತಿಗಳ ಹೆಸರು ಮರು ನಾಮಕರಣ ಮಾಡಬೇಕೆಂಬ ಕೂಗು ಸಾಕಷ್ಟು ವರ್ಷಗಳಿಂದ ಕೇಳಿ ಬರುತ್ತಿತ್ತು.
ಇದೀಗ ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ನಿರ್ವಹಣೆ ಮಾಡಲು ವಹಿಸಿಕೊಂಡಿರುವ ಅದಾನಿ ಕಂಪನಿ ತನ್ನ ಹೆಸರನ್ನು ಹಾಕಿದ ಬಳಿಕ ಮತ್ತೆ ಕೋಟಿ-ಚೆನ್ನಯರ ಹೆಸರು ನಾಮಕರಣ ಮೇಲ್ಪಂಕ್ತಿಗೆ ಬಂದಿದೆ.