Thursday, April 18, 2024
Homeತಾಜಾ ಸುದ್ದಿCD ಬ್ಲ್ಯಾಕ್ ಮೇಲ್ ಮಾಡಿದವರಿಗೆ, ಹಣ ನೀಡಿದ ಮೂವರಿಗೆ ಸಚಿವ ಸ್ಥಾನ: ಬಿಜೆಪಿ ಶಾಸಕ ಯತ್ನಾಳ್...

CD ಬ್ಲ್ಯಾಕ್ ಮೇಲ್ ಮಾಡಿದವರಿಗೆ, ಹಣ ನೀಡಿದ ಮೂವರಿಗೆ ಸಚಿವ ಸ್ಥಾನ: ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

spot_img
- Advertisement -
- Advertisement -

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಸಿ.ಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡು ಸಂಪುಟ ಸೇರಿದ್ದಾರೆ. ಯಡಿಯೂರಪ್ಪನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ ಎಂದು ಸವಾಲು ಹಾಕಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಬ್ಲಾಕ್ ಮೇಲ್ ಮಾಡಿದವರಿಗೆ, ಹಣ ಕೊಟ್ಟವರಿಗೆ ಸಚಿವ ಸ್ಥಾನ ನೀಡಲಾಗಿದೆ. ಕೆಲವರು ಸಿಡಿ ತೋರಿಸಿ ಸಿಎಂ ಅವರನ್ನು ಬೆದರಿಸಿ ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಲಿಂಗಾಯತ ಸಮುದಾಯದ ಮರ್ಯಾದೆ ತೆಗೆದಿದ್ದಾರೆ. ಸಂಕ್ರಮಣದ ಉತರಾರ್ಧದ ನಂತರ ಬಿ.ಎಸ್.ವೈ ಅಧ:ಪತನ ಆರಂಭವಾಗುತ್ತೆ. ನೈತಿಕತೆ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರಲಿ ಎಂದು ಗುಡುಗಿದ್ದಾರೆ.

ಮೂವರು ಶಾಸಕರು ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಈ ಮೂವರು ಈ ಹಿಂದೆ ನನ್ನನ್ನು ಭೇಟಿಯಾಗಿದ್ದರು. ನಾವೆಲ್ಲ ಸೇರಿ ಯಡಿಯೂರಪ್ಪನವರನ್ನು ಕೆಳಗಿಳಿಸೋಣ ಎಂದಿದ್ದರು. ಅವರ ಮಾತು ಕೇಳಿ ನನಗೆ ಅಚ್ಚರಿಯಾಗಿತ್ತು. ಇದೀಗ ಸಿಎಂ ಅವರನ್ನು ಬ್ಲಾಕ್ ಮೇಲ್ ಮಾಡಿ ಸಚಿವರಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿರುವ ಯಡಿಯೂರಪ್ಪ, ಅಧಿಕಾರದಿಂದ ತಮ್ಮನ್ನು ಕೆಳಗೆ ಇಳಿಸಿದರೆ ತಮ್ಮಿಂದ ಹಣ ಪಡೆದ ಮಠಗಳು ಕೇಂದ್ರದ ವಿರುದ್ಧ ಬಂಡೇಳುವಂತೆ ಯೋಜನೆ ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿಸಿದ್ದಾರೆ. ಸಿದ್ದರಾಮಯ್ಯ, ಜಮೀರ್, ಡಿಕೆಶಿ, ಕೆ.ಜೆ ಜಾರ್ಜ್ ಕೂಡ ಬಿ ಎಸ್ ವೈ ಜತೆಗಿದ್ದಾರೆ. ಸಿಎಂ ಬಿ ಎಸ್ ವೈ, ವಿಜಯೇಂದ್ರ ಕಾಂಗ್ರೆಸ್ ನ ಈ ನಾಯಕರನ್ನೂ ಖರೀದಿ ಮಾಡಿದ್ದಾರೆ. ಈಗ ವಿಪಕ್ಷ ಎಂಬುದು ಇಲ್ಲ, ಕಾಂಗ್ರೆಸ್ ಸತ್ತು ಹೋಗಿದೆ. ವಿಪಕ್ಷ ಸಂಪೂರ್ಣ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದೆ ಎಂದು ಗುಡುಗಿದ್ದಾರೆ.

- Advertisement -
spot_img

Latest News

error: Content is protected !!