- Advertisement -
- Advertisement -
ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ತಮ್ಮ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳು ಶೀಘ್ರ ಅನುಷ್ಟಾನದ ಕುರಿತು ಮನವಿ ಸಲ್ಲಿಸಿದರು.
ಸುರತ್ಕಲ್ ಮಾರುಕಟ್ಟೆಯನ್ನು ಉನ್ನತೀಕರಿಸಿ ಅಭಿವೃದ್ಧಿ ಮಾಡುವುದರ ಬಗ್ಗೆ ಮತ್ತು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಿ ಅಭಿವೃದ್ಧಿ ಮಾಡುವ ಬಗ್ಗೆ ವಿಶೇಷವಾಗಿ ಮುಖ್ಯಮಂತ್ರಿಗಳ ಗಮನ ಸೆಳೆದರು.
- Advertisement -