- Advertisement -
- Advertisement -
ಸುರತ್ಕಲ್: ದೇಶದಲ್ಲೇ ಮೊದಲ ಬಾರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ (ಹೆಚ್ಪಿಸಿಎಲ್) ಏಥರ್ ಕಂಪೆನಿಯ ಇಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ವ್ಯವಸ್ಥೆಗೆ ಶಾಸಕ ವೈ. ಭರತ್ ಶೆಟ್ಟಿ ಚಾಲನೆ ನೀಡಿದ್ರು. ಇಲ್ಲಿನ ವಿಜಯ ಫ್ಯೂಲ್ ಪಾರ್ಕ್ನಲ್ಲಿ ಇವಿ ಚಾರ್ಜಿಂಗ್ ವ್ಯವಸ್ಥೆ ಪ್ರಾರಂಭಗೊಂಡಿದೆ.
ಉದ್ಘಾಟನೆಯ ನಂತರ ಮಾತನಾಡಿದ ಶಾಸಕ ಭರತ್ ಶೆಟ್ಟಿಯವರು, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಚಾರ್ಜಿಂಗ್ ವ್ಯವಸ್ಥೆಯನ್ನು ಆರಂಭಿಸಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಏಥರ್ ಕಂಪೆನಿಯ ಸಹಭಾಗಿತ್ವದಲ್ಲಿ ದ್ವಿಚಕ್ರ ಚಾರ್ಜಿಂಗ್ ಸ್ಟೇಷನ್ ಅನ್ನು ಹೆಚ್ಪಿಸಿಎಲ್ ಸುರತ್ಕಲ್ನಲ್ಲಿ ಪ್ರಾರಂಭಿಸಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಲಿ ಎಂದರು.
- Advertisement -