- Advertisement -
- Advertisement -
ಮಂಗಳೂರು: ಕೋವಿಡ್ -19ರ ಸಲುವಾಗಿ ಲಾಕ್ ಡೌನ್ ವಿಧಿಸಿದ ಪರಿಣಾಮ ಸಾಮಾನ್ಯ ಜನರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ, ಉದ್ಯಮ ಹಾಗೂ ವ್ಯವಹಾರಗಳಿಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ನಿಂದ ಸಾಲ ಪಡೆದ ಉದ್ದಿಮೆದಾರರು ಆರ್ಥಿಕ ಹೊಡೆತಕ್ಕೆ ಸಿಲುಕಿ ತತ್ತರಿಸಿದ್ದಾರೆ.
ಈ ನಿಟ್ಟನಲ್ಲಿ ಎಲ್ಲಾ ಮಾದರಿಯ ಹಣಕಾಸು ಸಂಸ್ಥೆಗಳು ಗ್ರಾಹಕರ ಮೇಲೆ ವಿಧಿಸಿರುವ EMI ಹಾಗೂ ಅವಧಿ ಮೀರಿದ ಸಾಲಗಳ ವಸೂಲಾತಿಗೆ ಪರಿಸ್ಥಿತಿ ಸುಧಾರಿಸುವವರೆಗೆ ತಡೆ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮುಖಾಂತರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ.
- Advertisement -