Saturday, June 28, 2025
Homeಕರಾವಳಿಉಡುಪಿಉಡುಪಿ: ರಸ್ತೆ ಅವ್ಯವಸ್ಥೆ ಬಗ್ಗೆ ಗರಂ ಆಗಿದ್ದ ಯುವತಿ: ಕೂಲ್‌ ಆಗಿ ಪ್ರತಿಕ್ರಿಯೆ ಕೊಟ್ಟ ಶಾಸಕ...

ಉಡುಪಿ: ರಸ್ತೆ ಅವ್ಯವಸ್ಥೆ ಬಗ್ಗೆ ಗರಂ ಆಗಿದ್ದ ಯುವತಿ: ಕೂಲ್‌ ಆಗಿ ಪ್ರತಿಕ್ರಿಯೆ ಕೊಟ್ಟ ಶಾಸಕ ರಘುಪತಿ ಭಟ್‌

spot_img
- Advertisement -
- Advertisement -

ಉಡುಪಿ: ಪೆರಂಪಳ್ಳಿ-  ಮಣಿಪಾಲ ರಸ್ತೆ ಅವ್ಯವಸ್ಥೆಯ ಬಗ್ಗೆ ಯುವತಿಯೊಬ್ಬರು ಉಡುಪಿ ಶಾಸಕರನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗುತ್ತಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ರಘುಪತಿ ಭಟ್ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರು ರಸ್ತೆಯ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ. ನಾನು ಮನೆಗೆ ಹೋಗುವ ರಸ್ತೆ ಇದಾಗಿದ್ದು, ಈ ರಸ್ತೆ ಸಮಸ್ಯೆಯ ಬಗ್ಗೆ ನನಗೆ ಗಂಭೀರತೆ ಇದೆ. ಈಗಾಗಲೇ ಒಂದು ಬಾರಿ ಪ್ಯಾಚ್ ವರ್ಕ್ ಮಾಡಿದ್ದೆವು. ಕಳೆದ ಬಾರಿ ಮತ್ತೊಮ್ಮೆ ಜೋರು ಮಳೆಯಾಗಿದ್ದರಿಂದ ರಸ್ತೆ ಹಾಳಾಗಿದೆ ಎಂದಿದ್ದಾರೆ.

ಜನತೆಗೆ ನಾನು ಈ ಮೂಲಕ ಸ್ಪಷ್ಟನೆ ನೀಡುತ್ತೇನೆ, ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲ, ಕೇವಲ ಜಲ್ಲಿ ಹಾಕಲಾಗಿದೆ, ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದೆಂದು ಸಣ್ಣ ಲೇಯರ್ ಡಾಂಬರ್ ಹಾಕಲಾಗಿದೆ, ಇನ್ನು ಎರಡು ಲೇಯರ್ ಡಾಂಬರ್ ಹಾಕುವುದು ಬಾಕಿ ಇದೆ ಎಂದರು.

ಇದು ಕಳಪೆ ಕಾಮಗಾರಿಯಲ್ಲ ಏಕೆಂದರೆ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ, ಮಳೆ ನಿಂತ ತಕ್ಷಣ ಪ್ಯಾಚ್ ವರ್ಕ್ ಮಾಡುತ್ತೇವೆ ಎಂದರು. ಕಳೆದ ಡಿಸೆಂಬರ್ ತಿಂಗಳಲ್ಲಷ್ಟೇ ಈ ಕಾಮಗಾರಿ ಪ್ರಾರಂಭವಾಗಿದೆ. ಇದೊಂದು ದೊಡ್ಡ ಕಾಮಗಾರಿಯಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

- Advertisement -
spot_img

Latest News

error: Content is protected !!