- Advertisement -
- Advertisement -
ಬಂಟ್ವಾಳ: ವಕೀಲರ ಸಂಘದ ವತಿಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ನಡೆದ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭವು ಶನಿವಾರದಂದು ಬಂಟ್ವಾಳದಲ್ಲಿ ಶ್ರೀ ರಾಜೇಶ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಕೀಲರ ಸಂಘದ ಅಭಿವೃದ್ಧಿ ಮತ್ತು ಡಿಜಿಟಲೀಕರಣ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಶ್ರೀ ರಿಚರ್ಡ್ ಕೋಸ್ತ ಎಂ ಅವರು ವಹಿಸಲಿದ್ದರು. ಕಾರ್ಯಕ್ರಮದಲ್ಲಿ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ವಕೀಲರ ಸಂಘದಿಂದ ಗೌರವಿಸಲಾಯಿತು.
ಸಮಾರಂಭದಲ್ಲಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಹಾಗು ಪಧಾದಿಕಾರಿಗಳು ಉಪಸ್ಥಿತರಿದ್ದರು.
- Advertisement -