Wednesday, May 1, 2024
Homeಕರಾವಳಿಉಡುಪಿನಾನೂ ಕರಸೇವೆಯಲ್ಲಿ ಭಾಗಿಯಾಗಿದ್ದೆ, ತಾಕತ್ತಿದ್ದರೆ ನನ್ನ ಬಂಧಿಸಿ: ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಸವಾಲು

ನಾನೂ ಕರಸೇವೆಯಲ್ಲಿ ಭಾಗಿಯಾಗಿದ್ದೆ, ತಾಕತ್ತಿದ್ದರೆ ನನ್ನ ಬಂಧಿಸಿ: ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಸವಾಲು

spot_img
- Advertisement -
- Advertisement -

ಬೆಂಗಳೂರು: ನಿಮ್ಮ ಸರ್ಕಾರಕ್ಕೆ ತಾಕತ್ ಇದ್ದರೆ, ಸಿದ್ದರಾಮಯ್ಯ ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧನ ಮಾಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ವಿಚಾರಕ್ಕೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿರುವ ಸುನೀಲ್ ಕುಮಾರ್, ರಾವಣ ಮಾತ್ರ ರಾಮ ವಿರೋಧಿ ಅಲ್ಲ ಸಿದ್ದರಾಮಯ್ಯ ಕೂಡ ರಾಮ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ನಾನೂ ಕರ ಸೇವೆಯಲ್ಲಿ ಭಾಗಿ ಆಗಿದ್ದೆ, ತಾಕತ್ತಿದ್ದರೆ ಬಂಧನ ಮಾಡಿ, ಸಿದ್ದರಾಮಯ್ಯ ನಿಮಗೆ ನನ್ನ ಸವಾಲು ಎಂದು ಹೇಳಿರುವ ಸುನೀಲ್ ಕುಮಾರ್, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ, ಸರ್ಕಾರ ಹಿಂದುತ್ವದ ಪರ ಇದ್ದರೆ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಿ ಎಂದು ಸುನೀಲ್ ಕುಮಾರ್ ಸವಾಲು ಹಾಕಿದ್ದಾರೆ‌.

- Advertisement -
spot_img

Latest News

error: Content is protected !!