- Advertisement -
- Advertisement -
ಮಂಗಳೂರು: ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಈ ಹಿಂದೆ ಬಸ್, ಜೆಸಿಬಿ ಚಲಾಯಿಸಿ ಸುದ್ದಿಯಾಗದ್ದರು, ಇದೀಗ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ.
ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ ಮಳೆಯಿಂದ ಹಾನಿಗೀಡಾದ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಈ ವೇಳೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ಜೊತೆಗಿದ್ದರು.
- Advertisement -