Friday, June 27, 2025
Homeತಾಜಾ ಸುದ್ದಿಬ್ಯಾಂಕ್ ಸೇವಾವಧಿ ಬದಲಾಯಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

ಬ್ಯಾಂಕ್ ಸೇವಾವಧಿ ಬದಲಾಯಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

spot_img
- Advertisement -
- Advertisement -

ಮಂಗಳೂರು: ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್‌ಡೌನ್ ಸಂದರ್ಭ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಪೂ.11ಗಂಟೆಯವರೆಗೆ ಬದಲಾಯಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ ಸಲ್ಲಿಸಿದ್ದಾರೆ.

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 2 ಗಂಟೆಯವರೆಗೆ ನೀಡಲಾಗಿತ್ತು. ಲಾಕ್‌ಡೌನ್ ಸಂದರ್ಭ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8ರಿಂದ 11ರವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ಕಾಮತ್ ಮನವಿಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!