ಮಂಗಳೂರು: ಕರಾವಳಿಯಲ್ಲಿ ಮತ್ತೆ ಹಿಜಾಬ್ ವಿವಾದ ಶುರುವಾಗಿದೆ. ಮೇ 10ರಂದು ಮಂಗಳೂರಿನ ವಿವಿ ಘಟಕ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಪೋಷಕರ ಸಭೆಯಲ್ಲಿ ಹಿಜಾಬ್ ಧರಿಸದಂತೆ ಮೌಖಿಕವಾಗಿ ಸೂಚಿಸಲಾಗಿತ್ತಾದರೂ, ಕಾಲೇಜು ಆಡಳಿತ ಮಂಡಳಿ ಯಾವುದೇ ಆದೇಶ ಜಾರಿ ಮಾಡಿರಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಹಿಂದೂ ವಿದ್ಯಾರ್ಥಿಗಳು ಹೋರಾಟಕ್ಕೆ ಇಳಿದಿದ್ದರು. ಇದಾದ ಬಳಿಕ ಅನೇಕ ಬೆಳವಣಿಗೆಗಳಾಗಿದ್ದು ಸದ್ಯ ಈ ಬಗ್ಗೆ ಸಭೆಗಳು, ಚರ್ಚೆಗಳು ನಡೆಯುತ್ತಿವೆ.
ಇನ್ನು ಮಂಗಳೂರಿನ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹಿಜಾಬ್ ಧರಿಸಿ ಬಂದರೆ ಕಾಲೇಜಿಗೆ ಸೇರಿಸುವುದಿಲ್ಲ ಎಂದು ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಹಿಜಾಬ್ ವಿವಾದದ ಹಿಂದೆ ಹಲವು ಪಕ್ಷಗಳ ಕೈವಾಡ ಇದೆ. ಎಸ್ಡಿಪಿಐ, ಕಾಂಗ್ರೆಸ್, ಕಮ್ಯೂನಿಸ್ಟ್ ಪಕ್ಷಗಳ ಕೈವಾಡ ಇದೆ. ಹಿಜಾಬ್ ಮೂಲಕ ರಾಜ್ಯ ಸರ್ಕಾರಕ್ಕೆ ಮುಜುಗರ ತರುವ ಯತ್ನ ನಡೆಯುತ್ತಿದೆ. ಕಾನೂನು ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ ಎಂದು ಹೇಳಿದ್ದಾರೆ. ಇಂದು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸಿಡಿಸಿ ಮೀಟಿಂಗ್ ನಡೆಯಿತು. ಈ ವೇಳೆ ಶಾಸಕರು ಹಿಜಾಬ್ ಧರಿಸದೇ ಬರದಂತೆ ತಿಳಿಸಿದ್ದಾರೆ.