- Advertisement -
- Advertisement -
ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದ ವೇಳೆ ಜಿಲ್ಲೆಯ ಐದು ಶಾಸಕರು ಗೈರಾಗಿದ್ದಾರೆ.
ಬೈಂದೂರು ಎಂಎಲ್ಎ ಸುಕುಮಾರ್ ಶೆಟ್ಟಿ, ಸಚಿವ ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಲಾಲಾಜಿ ಮೆಂಡನ್ ಈ ಐವರು ಗೈರಾಗಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರದಲ್ಲಿರುವ ಮೂವರು ಶಾಸಕರು ಗೈರಾಗಿದ್ದಾರೆ ಎನ್ನಲಾಗಿದೆ.
ಇನ್ನು ಚುನಾವಣೆಯ ಚಟುವಟಿಕೆಯಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ, ಶಾಸಕ, ಸಚಿವ ಸುನೀಲ್ ಕುಮಾರ್ ಗೈರಾಗಿದ್ದಾರೆ. ಇನ್ನು ಸಿಎಂ ಗೆ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಸಾಥ್ ನೀಡಿದ್ದಾರೆ
- Advertisement -