- Advertisement -
- Advertisement -
ಬೆಂಗಳೂರು; ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಶಾಸಕರಾದ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಮಾಡಲಾಗಿದೆ.
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು, ‘ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು. ಅದರಂತೆ ಇದೀಗ ಇಬ್ಬರನ್ನು ಉಚ್ಛಾಟನೆ ಮಾಡಲಾಗಿದೆ.
- Advertisement -