- Advertisement -
- Advertisement -
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ಪರಿಷತ್ ಸದಸ್ಯ ಗೋವಿಂದರಾಜ್ ಹಾಗೂ ನಜೀರ್ ಅಹ್ಮದ್ ನೇಮಕವಾಗಿದ್ದಾರೆ.
ವಿಧಾನಪರಿಷತ್ ಸದಸ್ಯರಾದಂತ ಕೆ.ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ರಾಜ್ಯ ಸರ್ಕಾರವು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಇಂದು ಆದೇಶ ಹೊರಡಿಸಿದೆ.
ಇದಲ್ಲದೇ ಕರ್ನಾಟಕ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪೇ ಸಿಎಂ ಅಭಿಯಾನದ ರೂಪಾರಿಯಾಗಿದ್ದಂತ ಚುನಾವಣಾ ನೀತಿ ತಂತ್ರಜ್ಞ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಎಂಎಲ್ಸಿ ಕೆ.ಗೋವಿಂದರಾಜ್, ನಜೀರ್ ಅಹ್ಮದ್ ಹಾಗೂ ಸುನೀಲ್ ಕನುಗೋಳ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
- Advertisement -