Sunday, May 5, 2024
Homeತಾಜಾ ಸುದ್ದಿಯಾವನ್ರೀ ಅವನು ಮುತಾಲಿಕ್: ಪ್ರಮೋದ್ ಮುತಾಲಿಕ್ ವಿರುದ್ಧ ಎಂಎಲ್ಸಿ ಹೆಚ್.ವಿಶ್ವನಾಥ್ ಗುಡುಗು

ಯಾವನ್ರೀ ಅವನು ಮುತಾಲಿಕ್: ಪ್ರಮೋದ್ ಮುತಾಲಿಕ್ ವಿರುದ್ಧ ಎಂಎಲ್ಸಿ ಹೆಚ್.ವಿಶ್ವನಾಥ್ ಗುಡುಗು

spot_img
- Advertisement -
- Advertisement -

ಮೈಸೂರು : ಹಿಜಾಬ್, ಆಜಾನ್, ಹಲಾಲ್ ವಿವಾದ ನಡೆಯುತ್ತಿದ್ದು, ಇದರ ಜೊತೆಗೆ ಈಗ ಅಕ್ಷಯ ತೃತೀಯದಂದು ಮುಸ್ಲಿಂ ಅಂಗಡಿಯಿಂದ ಹಿಂದೂಗಳು ಚಿನ್ನ ಖರೀದಿಸದಂತೆ ಶ್ರೀರಾಮ ಸೇನೆ ಸೇರಿದಂತೆ ಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿವೆ.

ಅದರಲ್ಲೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಈ ಎಲ್ಲ ವಿಷಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದು, ಜೊತೆಗೆ ಮೇ 9 ರ ವೇಳೆಗೆ ಆಜಾನ್ ನಿಲ್ಲಿಸದಿದ್ದರೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಆರಂಭಿಸಲಾಗುತ್ತದೆ ಎಂದಿದ್ದಾರೆ.

ಇವರ ಮಧ್ಯೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್, ಯಾವನ್ರೀ ಅವ ಪ್ರಮೋದ್ ಮುತಾಲಿಕ್ ? ಪಂಚಾಯಿತಿಗೋ, ಮುನ್ಸಿಪಾಲ್ಟಿಗೋ ಆಯ್ಕೆಯಾದ ಅನುಭವ ಇದೆಯಾ ? ಇಂಥವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಆಗುವುದಿಲ್ಲ ಎಂದರೆ ಏನರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!