ಚೆನ್ನೈ: MI ಮೊಬೈಲ್ ಫೋನ್ ಗಳನ್ನು ಸಾಗಿಸುತ್ತಿದ್ದ ಲಾರಿ ಕಂಟೈನರ್ ನ್ನು ಅಡ್ಡ ಗಟ್ಟಿ 15 ಕೋಟಿ ಮೌಲ್ಯದ ಮೊಬೈಲ್ ಫೋನ್ ಗಳನ್ನು ದರೋಡೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ- ಹೊಸೂರು ಹೈವೇ ನಲ್ಲಿ ನಡೆದಿದೆ.
ಡ್ರೈವರ್ ಸತೀಶ್ ಕುಮಾರ್, ಕ್ಲೀನರ್ ಅರುಣ್ ಮೊಬೈಲ್ ಘಟಕದಿಂದ ಲೋಡ್ನೊಂದಿಗೆ ಮಂಗಳವಾರ 3 ಗಂಟೆ ಸುಮಾರಿಗೆ ಮುಂಬೈಗೆ ಪ್ರಯಾಣ ಆರಂಭಿಸಿದ್ದರು. ವೆಲ್ಲೂರು ಬಳಿ ರಾತ್ರಿ ಊಟ ಮಾಡಿ ಮತ್ತೆ ಪ್ರಯಾಣ ಮುಂದುವರಿಸಿದ್ದರು. ಮೆಲುಮಲೈ ಸಮೀಪ ಮತ್ತೊಂದು ಟ್ರಕ್ ಮೊಬೈಲ್ಗಳಿದ್ದ ಟ್ರಕ್ ಅನ್ನು ಫಾಲೋ ಮಾಡಲು ಆರಂಭಿಸಿತ್ತು. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಕೃಷ್ಣಗಿರಿಯ ಸಮೀಪ ಟ್ರಕ್ ಮೂಲಕ ಅಡ್ಡಗಡ್ಡಿ ವಾಹನವನ್ನು ನಿಲ್ಲಿಸಿದ್ದರು. ಈ ವೇಳೆ ಲಾರಿಯನ್ನು ಅಡ್ಡಗಟ್ಟಿದ ದರೋಡೆಕೋರರು ಲಾರಿ ಚಾಲಕರಾದ ಅರುಣ್ ಹಾಗೂ ಸತೀಶ್ ಕುಮಾರ್ ಎಂಬವರ ಮೇಲೆ ಹಲ್ಲೆ ನಡೆಸಿ ಫೋನ್ ಗಳನ್ನು ಹೊತ್ತೊಯ್ದಿದ್ದಾರೆ.
ಗಾಯಗೊಂಡ ಚಾಲಕರು ಅಂಬುಲೆನ್ಸ್ ಒಂದರ ಸಹಾಯದಿಂದ ಸ್ಥಳೀಯ ಕೃಷ್ಣಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಆರೋಪಿಗಳ ಪತ್ತೆಗೆ ಹೊಸೂರು ಡಿಎಸ್ಪಿ ಮುರಳಿ ನೇತೃತ್ವದಲ್ಲಿ, 17 ಪೊಲೀಸರ ತಂಡವನ್ನು ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.