ಪುತ್ತೂರು; ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗಾಗಿ ರವಿ ಬಿ. ಎಸ್ ಪಿಐ ಪುತ್ತೂರು ಗ್ರಾಮಾಂತರ ಠಾಣೆ ರವರ ನೇತೃತ್ವದಲ್ಲಿ ತನಿಖಾ ತಂಡವು ವಿವಿಧ ಆಯಾಮಗಳಲ್ಲಿ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ತನಿಖೆ ನಡೆಸಿ, ಆರೋಪಿ ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಹರೀಶ್ ನಾಯ್ಕ (30) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಬ್ಯಾಟರಿ ಸೆಲ್ ಗಳ ಕಳವು ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಯಿಂದ ರೂ 48000.00 ಮೌಲ್ಯದ 24 ಬ್ಯಾಟರಿ ಸೆಲ್ ಗಳನ್ನು, ಕಳವು ಮಾಡಲು ಬಳಸಿದ ರೂ 2.5 ಲಕ್ಷ ಮೌಲ್ಯದ ಕೆಎ 19 ಎಂಬಿ 2226 ನೇ ನೋಂದಣಿಯ ಕಾರು ಮತ್ತು 2 ಮೊಬೈಲ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಬೇಧಿಸುವಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್. ರವರ ನಿರ್ದೇಶನದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ ಬಿ. ಎಸ್ ರವರ ನೇತೃತ್ವದ, ಪುತ್ತೂರು ಗ್ರಾಮಾಂತರ ಠಾಣಾ ಪಿ ಎಸ್ ಐ (ಕಾ&ಸು) ಜಂಬುರಾಜ್ ಬಿ ಮಹಾಜನ್, ಪಿಎಸ್ಐ ( ತನಿಖೆ) ಸುಷ್ಮಾ ಜಿ ಭಂಡಾರಿ, ಎಎಸ್ಐ ಮುರುಗೇಶ್ ಬಿ, ಹೆಡ್ ಕಾನ್ಸ್ಟೇಬಲ್ ಗಳಾದ ಪ್ರವೀಣ್ ಎನ್. ಹರೀಶ್ ಜಿ.ಎನ್, ಶರೀಫ್ ಸಾಬ್, ಕಾನ್ಸ್ಟೇಬಲ್ ಗಳಾದ ಚಂದ್ರಶೇಖರ, ಶರಣಪ್ಪ ಪಾಟೀಲ್, ನಾಗೇಶ್ ಕೆ.ಸಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರ ತಂಡ ಕಾರ್ಯನಿರ್ವಹಿಸಿರುತ್ತಾರೆ.